ಅಮೃತ ಜ್ಯೋತಿ (Amruth Jyoti Yojana) ಕಾರ್ಯಕ್ರಮದಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವl (BPL) ಎಲ್ಲಾ ಕುಟುಂಬಕ್ಕೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸರ್ಕಾರ ಆದೇಶ ಹೊರಡಿಸಿದೆ.
ಹೌದು, ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ ಗಳವರೆಗೆ ವಿದ್ಯುತ್ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯಾವ ವರ್ಗದ ಜನರಿಗೆ ಎಷ್ಟು ಯೂನಿಟ್ ಗಳವರೆಗೆ ಸಹಾಯಧನ ನೀಡಲಾಗುವುದು?
ಗ್ರಾಮೀಣ ಪ್ರದೇಶದಲ್ಲಿ ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡಲಾಗುತ್ತಿರುವ 40 ಯೂನಿಟ್ ಗಳನ್ನು 75 ಯೂನಿಟ್ ಗಳವರೆಗೆ ಹೆಚ್ಚಿಸಲಾಗಿದೆ.
ಗ್ರಾಹಕರು 30-04-2022 ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್ ಶುಲ್ಕದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದಲ್ಲಿ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಬೇಕಾದ ದಾಖಲೆಗಳು
- ಬಿಪಿಎಲ್
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಸಹಿತ)
ಸಹಾಯಧನ ಹೇಗೆ ನೀಡಲಾಗುವುದು?
ಈ ಸೌಲಭ್ಯಕ್ಕೆ ಅರ್ಹರಾಗಿರುವ ವಿದ್ಯುತ್ ಗ್ರಾಹಕರು ಮಾಸಿಕ ವಿದ್ಯುತ್ ಬಿಲ್ಲನ್ನು ಸಂಪೂರ್ಣವಾಗಿ ನಿಗದಿತ ಅವಧಿಯೊಳಗೆ ಪಾವತಿಸಿದ ನಂತರ ಸದರಿ ಗ್ರಾಹಕರುಗಳಿಗೆ ಡಿಬಿಟಿ ಯೋಜನೆಯ ವ್ಯವಸ್ಥೆಯಡಿ ಸರ್ಕಾರದ ಸಹಾಯಧನವನ್ನು ಮರು ಪಾವತಿಸಲಾಗುವುದು.
ಅಮೃತ ಯೋಜನೆ ಬಗ್ಗೆ ಎಲ್ಲಿ ವಿಚಾರಿಸಬೇಕು?
ಸಾರ್ವಜನಿಕರು ತಮ್ಮ ಮನೆಯ ಲೈಟ್ ಬಿಲ್ ಕಟ್ಟಲು ಹೋಗುವಾಗಿ ಸಂಬಂಧಿಸಿದ ಕಚೇರಿಯಲ್ಲಿ ಅಮೃತ ಜ್ಯೋತಿ ಯೋಜನೆ ಬಗ್ಗೆ ವಿಚಾರಿಸಿದರೆ ಅವರು ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಚಿಗಾಗಿ ಹತ್ತಿರದ ಕೆಇಬಿ ಕಚೇರಿಯಲ್ಲಿಸಂಪರ್ಕಿಸಬಹುದು.